ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ
ಚಿತ್ರದುರ್ಗ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ವರ್ಷದ ಭೀಕರ ದುರಂತದಲ್ಲಿ ಒಂದಾಗಿದೆ. ಕಂಟೇನರ್ ಡಿಕ್ಕಿಯಿಂದ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಒಟ್ಟು 7ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಇನ್ನು ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಎನ್ನುವ ಕುಚಿಕು ಗೆಳೆಯರು ಸಹ ಸುಟ್ಟು ಕರಕಲಾಗಿದ್ದು, ನವ್ಯಳ ತಂದೆ ಮಂಜಪ್ಪ, ಸುಟ್ಟ ಕರಕಲಾದ ಬಸ್ನಲ್ಲಿ ಮಗಳನ್ನ ಹುಡುಕುತ್ತಿದ್ದು ದೃಶ್ಯ ಮನಕಲಕುವಂತಿತ್ತು. ಇನ್ನು ಇದೀಗ ನವ್ಯ ಹಾಗೂ ಮಾನಸಳ ಗೆಳೆತನ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟು ಕಣ್ಣೀರಿಟ್ಟಿದ್ದಾರೆ.
